1:00 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮೊಹರಂ ಆಚರಣೆಗೆ ಕೊರೊನಾ ಕರಿನೆರಳು: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಹಬ್ಬಕ್ಕೆ ಮಹಾಮಾರಿಯ ಕೊಡಲಿಯೇಟು

19/08/2021, 08:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು

info.reporterkarnataka@gmail.com

ಮೊಹರಂ ಹಬ್ಬವೆಂದರೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ದೊಡ್ಡ ಆಚರಣೆ. ಗ್ರಾಮೀಣ ಭಾಗದಲ್ಲಿ ಹಿಂದುಗಳು ಹೆಚ್ಚಾಗಿ ಸಂಭ್ರಮ ಸಡಗರದಿಂದ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಕೊರೊನಾದಿಂದ ಈ ಬಾರಿಯ ಮೊಹರಂ ಹಬ್ಬ ಫುಲ್ ಮಂಕಾಗಿದೆ.

ಮೊಹರಂ ಹಬ್ಬವನ್ನು ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಜನರು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾರೆ.ಹಿಂದೂ-ಮುಸ್ಲಿಂ ಭೇದವಿಲ್ಲದೆ ಜನರು ಭಾವೈಕ್ಯತೆಯಿಂದ ಆವರಿಸಿಕೊಂಡು ಬರುತ್ತಿದ್ದಾರೆ. ದೂರದ ನಗರಗಳಿಗೆ ದುಡಿಯಲು ಹೋದವರು ಮೊಹರಂ ಹಬ್ಬಕ್ಕೆ ತಪ್ಪದೆ  ಊರಿಗೆ ಮರಳಿ ಬರುತ್ತಾರೆ. ಹಬ್ಬದ ಮುನ್ನ ದಿನವೇ ತಮ್ಮ ತಮ್ಮ ಗ್ರಾಮಗಳಿಗೆ ಬಂದು ಸೇರುತ್ತಾರೆ.

ಮತ್ತೆ ಹಬ್ಬ ಮುಗಿಸಿ ತಮ್ಮ ತಮ್ಮ ಕೆಲಸಗಳಿಗೆ ಪಟ್ಟಣಗಳಿಗೆ ತೆರಳುತ್ತಾರೆ. ಆದರೆ ಈ ಬಾರಿ ಮೊಹರಂ ಆಚರಣೆ ಸರಕಾರದ ಆದೇಶದಂತೆ ನಡೆಯಲಿದೆ. ಗುದ್ದಲಿ ಹಾಕೋದಿಲ್ಲ. ಮೊಹರಂ ಕುಣಿತ ಇಲ್ಲ. ಜನ ಸೇರುವಂತಿಲ್ಲ. ಇದು ಸರಕಾರದ ಆದೇಶವಾಗಿದೆ. ಇದಕ್ಕೆಲ್ಲ ಕಾರಣ ಮಹಾಮಾರಿ ಕೊರೊನಾ. ಕೇವಲ ಸಾಂಕೇತಿಕ ಆರಣೆಗೆ ಮಾತ್ರ ಸೀಮಿತವಾಗಿದೆ.

ಮೊಹರಂ ಬರುವುದಕ್ಕಿಂತ ತಿಂಗಳು ಮುನ್ನವೇ ಗ್ರಾಮೀಣ ಪ್ರದೇಶದ ಜನರು ಮನೆ ಸ್ವಚ್ಛಗೊಳಿಸಿ ಬಣ್ಣ ಬಳಿಯುತ್ತಾರೆ. ಮನೆ ಮಂದಿಗೆ ಬಣ್ಣ ಬಣ್ಣದ ಹೊಸ ಬಟ್ಟೆಗಳನ್ನು ಖರೀದಿಸಲಾಗುತ್ತದೆ. ತಮ್ಮ ಬಂಧು ಬಾಂಧವರನ್ನು ಕರೆಸಿ ಕಂಜುರಿ ಮಾಡಿಸಿ ಊಟ ನೀಡಲಾಗುತ್ತದೆ.

ಹಾಡುಗಳ ಸ್ಪರ್ಧೆ ಏರ್ಪಡಿಸಿ ಬೆಳತನಕ ಗೀಗಿ ಪದ, ಸವಾಲ್ ಪದ, ಜವಾಬು ಪದ ನಡೆಯುತ್ತದೆ. ಅಡ್ಡ ಸೋಗು ಪಾತ್ರಗಳು ಕಂಡುಬರುತ್ತವೆ. ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಛತ್ರಿ ಹಿಡಿದುಕೊಂಡು ತಾಳಕ್ಕೆ ತಕ್ಕಂತೆ ಕುಣಿಯುವುದು ತಂಡಗಳು ಬಹಳ ರಂಜನೀಯವಾಗಿರುತ್ತದೆ. ದೇವರು ಕುಳಿತ ಸ್ಥಳದಲ್ಲೇ ಅಲೆಕುಣಿ ತೆಗೆದು ಅದರಲ್ಲಿ ಬೆಂಕಿ ಹಚ್ಚಿ ಅದರ ಸುತ್ತಲೂ ತಮ್ಮ ಬೇಡಿಕೆಗಳ ಈಡೇರಿಸಿ ಕೊಳ್ಳುತ್ತಾ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ. ಕೆಲವರು ಬೆಂಕಿಯಲ್ಲಿ ನಡೆಯುತ್ತಾರೆ. 

ದೇವರ ಎದುರು-ಬದುರು ಅಪ್ಪಿಕೊಳ್ಳುವುದು ನಡೆಯುತ್ತದೆ. ಆದರೆ ಈ ಬಾರಿ ಕರಿನೆರಳು ಕರೆದಿರುವುದರಿಂದ ದೇವರಿಗೆ ಕೂಡಿಸುವುದು ಕಡಿಮೆ. ಜನರು ಮನದಲ್ಲಿ ಸ್ಮರಿಸುವಂತಾಗಿದೆ. ಒಟ್ಟಿನಲ್ಲಿ ಗ್ರಾಮೀಣ ಜನರ ಬದುಕಿಗೆ ರಂಗು ನೀಡುವ ಮೊಹರಂ ಹಬ್ಬಕ್ಕೆ ಕೊರೊನಾದ  ಕರಿನೆರಳು ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು