5:04 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮೊಹರಂ ಆಚರಣೆಗೆ ಕೊರೊನಾ ಕರಿನೆರಳು: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಹಬ್ಬಕ್ಕೆ ಮಹಾಮಾರಿಯ ಕೊಡಲಿಯೇಟು

19/08/2021, 08:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು

info.reporterkarnataka@gmail.com

ಮೊಹರಂ ಹಬ್ಬವೆಂದರೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ದೊಡ್ಡ ಆಚರಣೆ. ಗ್ರಾಮೀಣ ಭಾಗದಲ್ಲಿ ಹಿಂದುಗಳು ಹೆಚ್ಚಾಗಿ ಸಂಭ್ರಮ ಸಡಗರದಿಂದ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಕೊರೊನಾದಿಂದ ಈ ಬಾರಿಯ ಮೊಹರಂ ಹಬ್ಬ ಫುಲ್ ಮಂಕಾಗಿದೆ.

ಮೊಹರಂ ಹಬ್ಬವನ್ನು ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಜನರು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾರೆ.ಹಿಂದೂ-ಮುಸ್ಲಿಂ ಭೇದವಿಲ್ಲದೆ ಜನರು ಭಾವೈಕ್ಯತೆಯಿಂದ ಆವರಿಸಿಕೊಂಡು ಬರುತ್ತಿದ್ದಾರೆ. ದೂರದ ನಗರಗಳಿಗೆ ದುಡಿಯಲು ಹೋದವರು ಮೊಹರಂ ಹಬ್ಬಕ್ಕೆ ತಪ್ಪದೆ  ಊರಿಗೆ ಮರಳಿ ಬರುತ್ತಾರೆ. ಹಬ್ಬದ ಮುನ್ನ ದಿನವೇ ತಮ್ಮ ತಮ್ಮ ಗ್ರಾಮಗಳಿಗೆ ಬಂದು ಸೇರುತ್ತಾರೆ.

ಮತ್ತೆ ಹಬ್ಬ ಮುಗಿಸಿ ತಮ್ಮ ತಮ್ಮ ಕೆಲಸಗಳಿಗೆ ಪಟ್ಟಣಗಳಿಗೆ ತೆರಳುತ್ತಾರೆ. ಆದರೆ ಈ ಬಾರಿ ಮೊಹರಂ ಆಚರಣೆ ಸರಕಾರದ ಆದೇಶದಂತೆ ನಡೆಯಲಿದೆ. ಗುದ್ದಲಿ ಹಾಕೋದಿಲ್ಲ. ಮೊಹರಂ ಕುಣಿತ ಇಲ್ಲ. ಜನ ಸೇರುವಂತಿಲ್ಲ. ಇದು ಸರಕಾರದ ಆದೇಶವಾಗಿದೆ. ಇದಕ್ಕೆಲ್ಲ ಕಾರಣ ಮಹಾಮಾರಿ ಕೊರೊನಾ. ಕೇವಲ ಸಾಂಕೇತಿಕ ಆರಣೆಗೆ ಮಾತ್ರ ಸೀಮಿತವಾಗಿದೆ.

ಮೊಹರಂ ಬರುವುದಕ್ಕಿಂತ ತಿಂಗಳು ಮುನ್ನವೇ ಗ್ರಾಮೀಣ ಪ್ರದೇಶದ ಜನರು ಮನೆ ಸ್ವಚ್ಛಗೊಳಿಸಿ ಬಣ್ಣ ಬಳಿಯುತ್ತಾರೆ. ಮನೆ ಮಂದಿಗೆ ಬಣ್ಣ ಬಣ್ಣದ ಹೊಸ ಬಟ್ಟೆಗಳನ್ನು ಖರೀದಿಸಲಾಗುತ್ತದೆ. ತಮ್ಮ ಬಂಧು ಬಾಂಧವರನ್ನು ಕರೆಸಿ ಕಂಜುರಿ ಮಾಡಿಸಿ ಊಟ ನೀಡಲಾಗುತ್ತದೆ.

ಹಾಡುಗಳ ಸ್ಪರ್ಧೆ ಏರ್ಪಡಿಸಿ ಬೆಳತನಕ ಗೀಗಿ ಪದ, ಸವಾಲ್ ಪದ, ಜವಾಬು ಪದ ನಡೆಯುತ್ತದೆ. ಅಡ್ಡ ಸೋಗು ಪಾತ್ರಗಳು ಕಂಡುಬರುತ್ತವೆ. ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಛತ್ರಿ ಹಿಡಿದುಕೊಂಡು ತಾಳಕ್ಕೆ ತಕ್ಕಂತೆ ಕುಣಿಯುವುದು ತಂಡಗಳು ಬಹಳ ರಂಜನೀಯವಾಗಿರುತ್ತದೆ. ದೇವರು ಕುಳಿತ ಸ್ಥಳದಲ್ಲೇ ಅಲೆಕುಣಿ ತೆಗೆದು ಅದರಲ್ಲಿ ಬೆಂಕಿ ಹಚ್ಚಿ ಅದರ ಸುತ್ತಲೂ ತಮ್ಮ ಬೇಡಿಕೆಗಳ ಈಡೇರಿಸಿ ಕೊಳ್ಳುತ್ತಾ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ. ಕೆಲವರು ಬೆಂಕಿಯಲ್ಲಿ ನಡೆಯುತ್ತಾರೆ. 

ದೇವರ ಎದುರು-ಬದುರು ಅಪ್ಪಿಕೊಳ್ಳುವುದು ನಡೆಯುತ್ತದೆ. ಆದರೆ ಈ ಬಾರಿ ಕರಿನೆರಳು ಕರೆದಿರುವುದರಿಂದ ದೇವರಿಗೆ ಕೂಡಿಸುವುದು ಕಡಿಮೆ. ಜನರು ಮನದಲ್ಲಿ ಸ್ಮರಿಸುವಂತಾಗಿದೆ. ಒಟ್ಟಿನಲ್ಲಿ ಗ್ರಾಮೀಣ ಜನರ ಬದುಕಿಗೆ ರಂಗು ನೀಡುವ ಮೊಹರಂ ಹಬ್ಬಕ್ಕೆ ಕೊರೊನಾದ  ಕರಿನೆರಳು ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು