2:20 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ ಸಿ ಸ್ಥಾನ: ನಂಜನಗೂಡಿಯಲ್ಲಿ ಅಹಿಂದ ಮುಖಂಡರ ಒತ್ತಾಯ

27/05/2024, 21:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡುವಂತೆ ವಿವಿಧ ಸಮಾಜಗಳು ಸೇರಿದಂತೆ ಅಹಿಂದ ಮುಖಂಡರುಗಳು ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡಿದ್ದಾರೆ.
ಅಹಿಂದ ಮುಖಂಡರುಗಳಾದ ಕೆಂಪಣ್ಣ, ರಾಜು, ಒಬೇದುಲ್ಲಾ ಸೇರಿದಂತೆ ವಿವಿಧ ಸಮಾಜದ ಮುಖಂಡರುಗಳು ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಐದು ವರ್ಷ ಶಾಸಕರಾಗಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಪಡಿಸುವ ಮೂಲಕ ಜನಾನುರಾಗಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ವರಿಷ್ಠರ ಮಾತಿನಂತೆ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿ ಅವರ ಗೆಲುವಿಗೆ ಸಹಕಾರಿಯಾಗಿದ್ದಾರೆ.
ಸಿದ್ದರಾಮಯ್ಯನವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜವಾಬ್ದಾರಿ ನೋಡಿಕೊಳ್ಳುತ್ತಿರುವ ಇವರಿಗೆ ಸಾಂವಿಧಾನಿಕ ಹುದ್ದೆ ಎಂಎಲ್ ಸಿ ಸ್ಥಾನ ನೀಡಿದರೆ ಕ್ಷೇತ್ರದ ಜೊತೆಗೆ ಮೈಸೂರು ಚಾಮರಾಜನಗರ ಮಂಡ್ಯ ಹಾಸನ ಕೊಡಗು ಜಿಲ್ಲೆಗಳ ಅಭಿವೃದ್ಧಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಈ ಭಾಗದ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಎಚ್ ಸಿ ಮಹದೇವಪ್ಪ,ಕೆ. ವೆಂಕಟೇಶ್ ಸೇರಿದಂತೆ ಪಕ್ಷದ ವರಿಷ್ಠರು ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕುರಿಹುಂಡಿ ರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಅಹಿಂದ ಸಂಚಾಲಕ ಕೃಷ್ಣ, ತಾಲೂಕು ಘಟಕದ ಅಧ್ಯಕ್ಷ ಮಹದೇವು, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಒಬೇದುಲ್ಲ, ವೀರಶೈವ ಮುಖಂಡ ಗುರುಪಾದಪ್ಪ, ಓಬಿಸಿ ಉಪಾಧ್ಯಕ್ಷ ರಾಜಣ್ಣ, ರಾಜ್ಯ ಅಹಿಂದ ಸಂಚಾಲಕ ಹುಚ್ಚಯ್ಯ, ಮುಖಂಡರಾದ ನೀಲಿ ಸಿದ್ದು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು