4:51 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು