2:26 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ

28/05/2024, 11:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಬಂಧಕ್ಕೀಡಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಪೊಲೀಸರ ವಿರುದ್ಧ ಕೂಗಾಡಿದ್ದರು. ನಂತರ ನಡೆದ ಪ್ರತಿಭಟನೆಯಲ್ಲಿ ಡಿಜೆ ಹಳ್ಳಿ, ಕೆಜೆಹಳ್ಳಿ ತರಹ ಬೆಳ್ತಂಗಡಿಯನ್ನು ಮಾಡುತ್ತೇವೆ ಎಂದಿದ್ದರು. ಈ ಸಂಬಂಧ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು. ನಂತರ ನಡೆದ ಘಟನೆ ಕುರಿತು ಸ್ಪಷ್ಠೀಕರಣ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಧರ್ಮಸ್ಥಳ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕರ ಮನೆಗೆ ನೋಟಿಸ್ ನೀಡಲು ಆರಂಭದಲ್ಲಿ ಮೂವರು ಪೊಲೀಸರು ತೆರಳಿದ್ದರು. ಆದರೆ ಶಾಸಕರು ಠಾಣೆಗೆ ಬಾರದೆ ಅಲ್ಲಿ ಜನ ಸೇರಿಸಿರುವುದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ಕಳುಹಿಸಬೇಕಾಯಿತು. ರಸ್ತೆ ಕಿರಿದಾಗಿರುವುದರಿಂದ ನೀವು ಅಲ್ಲಿಂದ ತೆರಳಿದರೆ ಜನರೂ ತೆರಳುತ್ತಾರೆ. ಆಗ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿರುವುದರಿಂದ ಪೊಲೀಸರು ವಾಪಸ್ ಬಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಅಮಾಯಕ ಎನ್ನುವುದು ತಪ್ಪು. ಅವರವರ ಪ್ರಕಾರ ಎಲ್ಲರೂ ಅಮಾಯಕರೇ. ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ. ಅಮಾಯಕ ಅಲ್ಲ ಎನ್ನುವುದಕ್ಕೆ ಬೇಕಾದ ಸಾಕ್ಷಿಯನ್ನು ನೀಡುತ್ತೇವೆ. ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು