8:12 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ ಶಂಕೆ

28/05/2024, 15:24

ಕೊಪ್ಪಳ(reporterkarnataka.com): ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ಬಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾವನ್ನಪ್ಪಿದವರನ್ನು ಹೊಸಲಿಂಗಾಪುರದ ರಾಜೇಶ್ವರಿ(50), ವಸಂತಾ(28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್(5) ಎಂದು ಗುರುತಿಸಲಾಗಿದೆ.
ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬಳು ಮಗಳು ಮೊಬೈಲ್ ಕರೆ ಮಾಡಿದ್ದಳು. ಆದರೆ ಇತ್ತ ಕಡೆ ರಾಜೇಶ್ವರಿ ಅವರು ಕರೆ ಸ್ವೀಕರಿಸಿಲ್ಲ. ಹಾಗಾಗಿ ಮಂಗಳವಾರ ಬೆಳಗ್ಗೆ ಮಗಳು ಬಂದು ನೋಡುವಾಗ ಮೂವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ರಾಜೇಶ್ವರಿ ಹಾಗೂ ಸಾಯಿಧರ್ಮ ತೇಜ್ ಅವರ ಶವ ಬೆಡ್ ರೂಮ್ ನಲ್ಲಿ ಹಾಗೂ ವಸಂತ ಅವರ ಶವ ಕಿಚನ್ ನಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆ ಕೃತ್ಯವಿರಬೇಕೆಂದು ಶಂಕಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು