6:21 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ

30/05/2024, 12:07

ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕೇರಳದ ಹೊಸದುರ್ಗಾ ತಾಲೂಕಿನ ಪುಲ್ಲೂರು ಗ್ರಾಮದ ನಿವಾಸಿಯಾದ ಸುಜಿತ್ ಎಂದು ಗುರುತಿಸಲಾಗಿದೆ.
ಪಿಸ್ತೂಲ ಖಾಯಿಲೆಯಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆಯೊಬ್ಬರು ಚಿಕಿತ್ಸೆಯನ್ನು ಪಡೆಯಲು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಜಿತ್ ಎಂಬವರ ಜತೆ ಮಾರ್ಚ್ 13ರಂದು ಬಂದಿದ್ದರು. ಚಿಕಿತ್ಸೆಯ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿರುವಾಗ ಮಾರ್ಚ್ 16ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಸುಜಿತ್ ಬಲವಂತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಒಪ್ಪಿಗೆಯಿಲ್ಲದೇ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಅವರ ನಗ್ನ ಫೋಟೋಗಳನ್ನು ತನ್ನ ಪೋನ್ ನಲ್ಲಿ ತೆಗೆದುಕೊಂಡಿದ್ದಾನೆ. ನಂತರ ಏಪ್ರಿಲ್ 4ರಂದು ಸುಜಿತ್ ಮಹಿಳೆಗೆ ಅವರ ನಗ್ನ ಪೋಟೋಗಳನ್ನು ತೋರಿಸಿ ಮಂಗಳೂರಿಗೆ ಬರುವಂತೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ಏಪ್ರಿಲ್ 4ರಿಂದ 8ರವರೆಗೆ ಮಂಗಳೂರು ಖಾಸಗಿ ಹೊಟೇಲೊಂದರಲ್ಲಿ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿ, ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ಮಹಿಳೆಗೆ ವುಡ್ ಪಾಯಿಜನ್ ಆಗಿದ್ದರಿಂದ ಏಪ್ರಿಲ್ 8ರಿಂದ ಮೇ 10ರವರಿಗೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಮಯ ಅಲ್ಲಿ ಕೂಡಾ ಸುಜಿತ್ ಬಲವಂತವಾಗಿ ಮಹಿಳೆಗೆ ಅತ್ಯಾಚಾರ ಮಾಡಿದ್ದಾನೆ.
ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಯಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು