8:48 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು