3:05 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ

31/05/2024, 18:30

ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಅದು ಬಿಟ್ಟು ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ತನ್ನ ಮೇಲೆ ಬೆಳ್ತಂಗಡಿ ಪೊಲೀಸರು ಹಾಕಿರುವ ಎರಡು ಎಫ್ ಐಆರ್ ರದ್ದತಿ ಕೋರಿ ಶಾಸಕ ಹರೀಶ್ ಪೂಂಜ ಅವರು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಶಾಸಕರ ನಡೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಂಧನ ಪ್ರಕರಣ ನಡೆದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾದೀಶರಿದ್ದಾರೆ. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದು. ಅದನ್ನು ಮಾಡಿ. ನ್ಯಾಯಾಲಯಕ್ಕೆ ತನ್ನ ಕಾರ್ಯ ಮಾಡಲು ಬಿಡಿ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಾರೆ ಎಂದು ನಮ್ಮ ಹಿಂದೆ ಬಂದು ಕುಳಿತರೆ, ನಾವು ಕೆಲಸ ಮಾಡುವುದು ಹೇಗೆ? ಈ ರೀತಿಯ ವರ್ತನೆಯನ್ನು ಸಹಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಪೀಠ ಎಚ್ಚರಿಕೆ ನೀಡಿತು.
ನೀವು ಠಾಣೆಗೆ ಹೋಗಬಾರದಿತ್ತು. ಯಾವುದೇ ವ್ಯಕ್ತಿಯನ್ನು ಬಂಧಿಸಿದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಶಾಸಕರು ಠಾಣೆಗೆ ಹೋದರೆ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ನ್ಯಾಯಮೂರ್ತಿ ಖಾರವಾಗಿಯೇ ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಇಟ್ಟ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಸಬ್ ಇನ್ಸ್‌ಪೆಕ್ಟರ್ ಅವರಲ್ಲಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಪ್ರಶ್ನಿಸಿ ಪೊಲೀಸರಿಗೆ ದಬಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು