9:12 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮತ ಎಣಿಕೆ ಕೇಂದ್ರದ ಸಿದ್ದತೆ: ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

31/05/2024, 20:07

ಮಂಗಳೂರು(reporterkarnataka.com): ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು,ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.
ಜೂನ್ 4ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವು ದರಿಂದ ಹಿಡಿದು ಸಂಜೆ ಇವಿಎಂ ಮಷಿನ್‍ಗಳು ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲಾ ಹಂತಗಳನ್ನು ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯಲ್ಲಿ ವಿವರಿಸಿದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ , ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.
ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ನಿಗದಿತ ಸ್ಥಳ ಗುರುತಿಸಿ ಸಿದ್ದತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ. ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ ಮಾಡುವಂತಿಲ್ಲ ಎಂದು ಅವರು ಹೇಳಿದರು.
ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ನುಡಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು