2:40 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌: ಲೋಗೋ ಅನಾವರಣ

31/05/2024, 20:49

ಮಂಗಳೂರು(reporterkarnataka.com): ಪಬ್ಲಿಕ್‌ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾ (ಪಿಆರ್‌ಸಿಐ)ದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌, ಮಂಗಳೂರು ಚಾಪ್ಟರ್‌ ಸಹಯೋಗಲ್ಲಿ ನಗರದ ಹೊಟೇಲ್‌ ಮೋತಿ ಮಹಲ್‌ನಲ್ಲಿ ನ. 8ರಿಂದ 10 ವರೆಗೆ ನಡೆಯಲಿದ್ದು, ಈ ಸಮಾವೇಶದ ಲೋಗೋ ಅನಾವರಣ ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಕಾರ್ಡೋಲೈಟ್‌ ಸಂಸ್ಥೆಯ ಮುಖ್ಯಸ್ಥ, ಮಾಜಿ ಮೇಯರ್‌ ದಿವಾಕರ ಕದ್ರಿ ಅವರು ಲೋಗೋ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾವೇಶಕ್ಕೆ ಶುಭ ಹಾರೈಸಿದರು.
ಪಿಆರ್‌ಸಿಐ ಸ್ಥಾಪಕಾಧ್ಯಕ್ಷ ಎಂ.ಬಿ.ಜಯರಾಮ್‌ ಅವರು ಮಾತನಾಡಿ, ಈ ವರ್ಷದ ಸಮ್ಮೇಳನದ ಧ್ಯೇಯವಾಕ್ಯ ‘ರಿಕನೆಕ್ಟ್’. ಇದು ಉದ್ಯಮದಲ್ಲಿನ ಸಂಪರ್ಕಗಳನ್ನು ಮರು ನಿರ್ಮಾಣ ಮತ್ತು ಬಲಪಡಿಸುವ ಯೋಜನೆಯನ್ನು ಪ್ರತಿಬಿಂಬಿಸುತ್ತದೆ.
ಸಮಾವೇಶದಲ್ಲಿ ‘ಚಾಣಕ್ಯ’ ಮತ್ತು ‘ಕೌಟಿಲ್ಯ’ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಪಿಆರ್‌, ಮಾಧ್ಯಮ ಮತ್ತು ಕಾರ್ಪೊರೇಟ್‌ ಸಂವಹನ ಮೊದಲಾದ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಲಾಗುತ್ತದೆ. ಪಿ.ಆರ್‌. ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಆಗುವ
ಬದಲಾವಣೆಗಳ ಮೇಲೆ ನಿರ್ದಿಷ್ಟ ಒತ್ತು ನೀಡುವ ಮೂಲಕ, ಬದಲಾಗುತ್ತಿರುವ ಉದ್ಯಮದ ಸವಾಲುಗಳ
ಕುರಿತು ಒಳನೋಟವುಳ್ಳ ಚರ್ಚೆಗಳು ಹಾಗೂ ಸಂವಾದಾತ್ಮಕ ವಿಚಾರಗೋಷ್ಠಿಗಳು ಸಮಾವೇಶದಲ್ಲಿರಲಿದೆ ಎಂದರು.
ಪಿಆರ್‌ ವೃತ್ತಿಪರರು,ಸಂವಹನಕಾರರು ಮತ್ತು ಸಂಬಂಧಿತ ಉದ್ಯಮಗಳಿಗೆ ಪ್ರಧಾನ ರಾಷ್ಟ್ರೀಯ ಸಂಸ್ಥೆಯಾಗಿ ಪಿಆರ್‌ಸಿಐ ಕೆಲಸ ಮಾಡುತ್ತಿದೆ. 2004ರಲ್ಲಿ ಇದು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ
ಪ್ರಧಾನ ಕಚೇರಿ ಹೊಂದಿದ್ದು, ದೇಶದ 59 ನಗರಗಳಲ್ಲಿ ವ್ಯಾಪಿಸಿದೆ. ಯುಎಇ ಮತ್ತು ಶ್ರೀಲಂಕಾದಲ್ಲಿ ಘಟಕಗಳನ್ನು ಹೊಂದುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಿದೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಮತ್ತು ಸಮಾವೇಶದ ಚೇರ್ಮನ್‌ ಡಾ. ರಾಘವೇಂದ್ರ ಹೊಳ್ಳ,ರಾಜ್ಯ ಮುಖ್ಯಸ್ಥ ಪಶುಪತಿ ಶರ್ಮ, ಮಂಗಳೂರು ಘಟಕದ ಅಧ್ಯಕ್ಷ ಕೆನ್ಯೂಟ್‌ ಪಿಂಟೋ,ಕಾರ್ಯದರ್ಶಿ ಉದಯ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು