12:40 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ

31/05/2024, 23:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು.


ನಂಜನಗೂಡು ಪಟ್ಟಣದ ಜೆಎಸ್ಎಸ್ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಕಾರ್ಮೆಲ್, ಸಿಟಿಜನ್ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಬಳಿಕ ಅವರು ಮಾತನಾಡಿ, ನಮ್ಮ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ. ಹಾಗಾಗಿ ಶಿಕ್ಷಕರೆಲ್ಲರೂ ಈ ಬಾರಿ ಹೊಸಬರನ್ನು ಆಯ್ಕೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ನಾನು ಶಾಸಕನಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ಅನುದಾನ ತಂದು ಅಭಿವೃದ್ಧಿ ಮಾಡಿರುವುದಲ್ಲದೆ ತಮ್ಮಗಳ ಅನುಕೂಲಕ್ಕಾಗಿ ಗುರುಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಹಾಗೂ 25 ಲಕ್ಷ ಅನುದಾನ ಮಂಜೂರು ಮಾಡಿದ್ದೇನೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಜ್ಞಾವಂತರಾದ ತಾವು ಈ ಬಾರಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯ ಮಹದೇವ ಪ್ರಸಾದ್, ಮುಖಂಡರುಗಳಾದ ಶಿವಣ್ಣ, ಪುಟ್ಟಸ್ವಾಮಿ,ಸಿದ್ದರಾಜು, ಶಂಕ್ರಪ್ಪ, ಬಾಲಚಂದ್ರು, ಪ್ರೇಮ ಶಂಭಯ್ಯ, ಮಹೇಶ್, ಪರಶಿವಮೂರ್ತಿ, ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು