4:07 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ

31/05/2024, 23:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು
ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ತೆರಳಿ ಮತದಾರ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಮತಪ್ರಚಾರಕ್ಕೆ ತೆರಳಿದ ಶಾಸಕರನ್ನು ಕೆಲವು ಶಾಲಾ ಮುಖ್ಯಸ್ಥರು ಮಾಲಾರ್ಪಣೆ ಮಾಡಿ ಶಾಲು ಹೊದಿಸಿ ಗೌರವಿಸಿದರು. ಬಳಿಕ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿ ಮರಿತಿಬ್ಬೆಗೌಡ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ಅನುಕೂಲ ವಾಗುವಂತಹ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ನಿಮಗೆಲ್ಲಾ ಅವರು ಚಿರಪರಿಚಿತರೆ ಆಗಿದ್ದು ಈಗ ಅವರು ಐದನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ಶಿಕ್ಷಕರುಗಳ ಭವಿಷ್ಯಕ್ಕಾಗಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ಮತ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು.


ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಸಿಎಂ ಶಂಕರ್, ಶ್ರೀಕಂಠ ನಾಯಕ ದೊರೆಸ್ವಾಮಿ,ಗುರುಮಲ್ಲಪ್ಪ ಶಶಿರೇಖಾ, ಬಾಲರಾಜ್, ಶಿವಪ್ಪ ದೇವರು, ದೊರೆಸ್ವಾಮಿ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು