10:07 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು

19/08/2021, 14:27

ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಕ್ಷೇಮವಾಗಿದ್ದಾರೆ. ಹಾಗೆ ಮನೆ ಮಂದಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 4-5 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಜೆಮ್ಷೆಡ್‌ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಮತ್ತೆ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು. ಅಫ್ಘಾನಿಸ್ತಾನದಲ್ಲಿ

ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದರು. ಆದರೆ ಅವರ ಜತೆಗಾರ ಮತ್ತೋರ್ವ ಧರ್ಮಗುರುವಿಗಾಗಿ ಅವರು ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು