10:51 PM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು

19/08/2021, 14:27

ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಕ್ಷೇಮವಾಗಿದ್ದಾರೆ. ಹಾಗೆ ಮನೆ ಮಂದಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 4-5 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಜೆಮ್ಷೆಡ್‌ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಮತ್ತೆ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು. ಅಫ್ಘಾನಿಸ್ತಾನದಲ್ಲಿ

ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದರು. ಆದರೆ ಅವರ ಜತೆಗಾರ ಮತ್ತೋರ್ವ ಧರ್ಮಗುರುವಿಗಾಗಿ ಅವರು ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು