1:17 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕುಡ್ಲದ ಕುಂಟಿಕಾನ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಜಾಮ್!: ದುಡಿದು ಸುಸ್ತಾಗಿದ್ದ ಜನರಿಗೆ ತಲೆ ಸುತ್ತುಭರಿಸುವ ಕಿರಿಕಿರಿ!

01/06/2024, 21:04

ಮಂಗಳೂರು(reporterkarnataka.com): ಟ್ರಾಫಿಕ್ ಜಾಮ್ ಗೆ ಕಡಲನಗರಿ ಕುಡ್ಲ ಸಿಟಿ ತುಂಬಾ ಪ್ರಸಿದ್ದಿ. ಈ ಮೊದಲು ಮಂಗಳೂರಿನ ಹೃದಯಭಾಗದಲ್ಲಿ ಮಾತ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದರೆ, ಇದೀಗ ಹೊಟ್ಟೆಯ ಭಾಗದಲ್ಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ಸಾಲಿಗೆ ಕುಂಟಿಕಾನ ಜಂಕ್ಷನ್ ಕೂಡ ಸೇರಿದೆ.


ಎಜೆ ಆಸ್ಪತ್ರೆ ಸಮೀಪದ ಕುಂಟಿಕಾನ ಜಂಕ್ಷನ್ ಅಂದ್ರೆ ನಗರದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಧಿಸುವ ಜಾಗ. ಇಲ್ಲಿ ಅಪಘಾತದ ಸಾಧ್ಯತೆ ಹೆಚ್ಚಾಗಿರುವುದರಿಂದ ಹೆದ್ದಾರಿಗೆ ಫ್ಲೈ ಓವರ್ ನಿರ್ಮಿಸಲಾಗಿದೆ. ಸಿಟಿ ಬಸ್ ಹಾಗೂ ಇತರ ವಾಹನಗಳು ಫ್ಲೈ ಓವರ್ ಕೆಳಗಡೆಯಿಂದ ಹಾದು ಹೋಗುತ್ತದೆ. ಆದರೆ ಫ್ಲೈ ಓವರ್ ಕೆಳಗಡೆ ಸಮರ್ಪಕವಾದ ಸರ್ವಿಸ್ ರಸ್ತೆ ಇಲ್ಲ. ತುಂಬಾ ಕಿರಿದಾದ ಕೊರಕಲಾದ ರಸ್ತೆ ಇದೆ.
ಸುಮಾರು 25 ವರ್ಷಗಳ ಹಿಂದೆ ಕುಂಟಿಕಾನ ಜಂಕ್ಷನ್ ಜನರಿಲ್ಲದೆ ಬಣಗುಟ್ಟುತ್ತಿತ್ತು. ಅಪರೂಪಕ್ಕೆ ಇಲ್ಲಿ ಸಿಟಿ ಬಸ್ ಗಳು ನಿಲ್ಲುತ್ತಿತ್ತು. ಯಾಕೆಂದರೆ, ಬಸ್ ಏರುವವರು, ಇಳಿಯುವವರು ಇರುತ್ತಿರಲಿಲ್ಲ. ಈಗ ಎಲ್ಲ ಬಸ್ ಗಳು ನಿಲ್ಲುತ್ತದೆ. ಎಜೆ ಆಸ್ಪತ್ರೆ ಬಂದ ಬಳಿಕ ಈ ಜಂಕ್ಷನ್ ಸಾಕಷ್ಟು ಅಭಿವೃದ್ಧಿ ಹೊಂದಿದೆ. ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿದೆ. ಹೊಟೇಲ್ ಗಳು ಬಂದಿವೆ. ಜಂಕ್ಷನ್ ನಲ್ಲೇ ಶಿಕ್ಷಣ ಸಂಸ್ಥೆಯೊಂದು ಹೊಸತಾಗಿ ತಲೆ ಎತ್ತಿದೆ. ಇದರೊಂದಿಗೆ ಅನತಿ ದೂರದಲ್ಲಿ ಸೈಂಟ್ ಆ್ಯನ್ಸ್ ಶಾಲೆ ಇದೆ. ಪಕ್ಕದಲ್ಲೇ ಕೆಎಸ್ಸಾರ್ಟಿಸಿ ಡಿಪೋ, ಆಗ್ನಿಶಾಮಕ ದಳ ಕಚೇರಿ,
ಡಿ ಮಾರ್ಟ್, ಕಾರ್ ಶೋ ರೂಮ್ ಎಲ್ಲವೂ ಇದೆ. ಇವೆಲ್ಲದರ ಫಲಶ್ರುತಿ ಎಂಬಂತೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಒಂದಿಬ್ಬರು ಟ್ರಾಫಿಕ್ ಪೊಲೀಸರು ಕೂಡ ಇರುತ್ತಾರೆ. ಆದರೆ ಸಂಜೆ ವೇಳೆ ವಾಹನಗಳ ದಟ್ಟಣೆ ಹೆಚ್ಚಾಗುತ್ತದೆ. ಹಾಗೆ ಕೆಲವು ವಾಹನ ಚಾಲಕರ ಅವಸರ ಹಾಗೂ ರೂಲ್ಸ್ ಬ್ರೇಕ್ ಮಾಡುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ತಾಸುಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಶೀಘ್ರದಲ್ಲೇ ಮಂಗಳೂರು ಟ್ರಾಫಿಕ್ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು