4:30 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

02/06/2024, 13:14

ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಅಮಾವಾಸೆಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯ 25ರ ಹರೆಯದ ಉದ್ಯಮಿ ಶ್ರೇಯಸ್ ನಾಯ್ಕ ಎಂಬಾತನೇ ಈ ಮರಿ ಪ್ರಜ್ವಲ್ ರೇವಣ್ಣ. ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಈತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕೇಸು ದಾಖಲಾಗುತ್ತಿದ್ದಂತೆ ಶ್ರೇಯಸ್ ತಲೆ ಮರೆಸಿಕೊಂಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಅದನ್ನು ಮೊಬೈಲ್ ನಲ್ಲಿ ಶೂಟಿಂಗ್ ಮಾಡಿಕೊಂಡಿದ್ದ. ನಂತರ ಆ ವೀಡಿಯೊವನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶ್ರೇಯಸ್ ಇದೇ ರೀತಿ ಹಲವು ಮಂದಿ ಕಾಲೇಜು ವಿದ್ಯಾರ್ಥಿ ನಿಯರಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು