ಇತ್ತೀಚಿನ ಸುದ್ದಿ
ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ
02/06/2024, 13:14

ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಅಮಾವಾಸೆಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯ 25ರ ಹರೆಯದ ಉದ್ಯಮಿ ಶ್ರೇಯಸ್ ನಾಯ್ಕ ಎಂಬಾತನೇ ಈ ಮರಿ ಪ್ರಜ್ವಲ್ ರೇವಣ್ಣ. ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಈತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕೇಸು ದಾಖಲಾಗುತ್ತಿದ್ದಂತೆ ಶ್ರೇಯಸ್ ತಲೆ ಮರೆಸಿಕೊಂಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಅದನ್ನು ಮೊಬೈಲ್ ನಲ್ಲಿ ಶೂಟಿಂಗ್ ಮಾಡಿಕೊಂಡಿದ್ದ. ನಂತರ ಆ ವೀಡಿಯೊವನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶ್ರೇಯಸ್ ಇದೇ ರೀತಿ ಹಲವು ಮಂದಿ ಕಾಲೇಜು ವಿದ್ಯಾರ್ಥಿ ನಿಯರಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.