4:19 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಲವ್ ಕಹಾನಿ: ಮಹಾರಾಷ್ಟ್ರದಲ್ಲಿ ತಂದೆಯಿಂದಲೇ  ದೂಧ್ ಗಂಗಾ ನದಿಗೆ ತಳ್ಳಲ್ಪಟ್ಟ ಟೀನೇಜ್ ಪುತ್ರಿ: ಶವ ಕರ್ನಾಟಕದಲ್ಲಿ ಪತ್ತೆ !

19/08/2021, 15:39

ಕೊಲ್ಹಾಪುರ(reporterkarnataka.com): ನೆರೆಯ ಮಹಾರಾಷ್ಟ್ರದಲ್ಲಿ ಜೀವಂತವಾಗಿ ನದಿಗೆ ತಳ್ಳಲ್ಪಟ್ಟ ಆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೃತದೇಹ ತೇಲಿಕೊಂಡು ಕರ್ನಾಟಕಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ನದಿಗೆ ತಳ್ಳಿದ್ದು ಬೇರೆ ಯಾರೂ ಅಲ್ಲ, ಬದಲಿಗೆ ಜನ್ಮಕೊಟ್ಟ ತಂದೆಯೇ ಈ ಕೃತ್ಯ ಎಸಗಿದ್ದ.

ಅದೊಂದು ಟೀನೇಜ್ ಲವ್ ಕಹಾನಿಗೆ ಸಂಬಂಧಿಸಿದ ಮರ್ಯಾದಾ ಹತ್ಯೆಯಾಗಿದೆ.

ಮಹಾರಾಷ್ಟ್ರ ಕೊಲ್ಹಾಪುರದ ಶಿರೋಲ್ ತಾಲೂಕಿನ ದತ್ತವಾಡ ನಿವಾಸಿಯಾದ ದಶರಥ್ ಕಾಟ್ಕರ್ ಎಂಬಾತ ತನ್ನ ಪುತ್ರಿ 17ರ ಹರೆಯದ ಸಾಕ್ಷಿ ಕಾಣೆಯಾಗಿದ್ದಾಳೆ ಎಂದು ಆಗಸ್ಟ್ 14ರಂದು ಕುರುಂದ್ವಾಡ್ ಪೊಲೀಸರಿಗೆ ದೂರು ನೀಡಿದ್ದ.

ಪೊಲೀಸರು ತನಿಖೆ ನಡೆಸಿದಾಗ ಯಾರೂ ಆಕೆಯನ್ನು ಅಪಹರಣ ಮಾಡಿದ ಬಗ್ಗೆ ಸುಳಿವು ದೊರಕಲಿಲ್ಲ. ಇದರಿಂದ ಸಂಶಯಗೊಂಡ ಪೊಲೀಸರು ತಂದೆಯನ್ನೇ ವಿಚಾರಣೆಗೆ ಗುರಿಪಡಿಸಿದರು. ಆ ವೇಳೆಗೆ ತಂದೆಯೇ ಮಗಳನ್ನು ನದಿಗೆ ತಳ್ಳಿ ಕೊಂದಿರುವ ವಿಚಾರ ಬೆಳಕಿಗೆ ಬಂತು.

ಮಗಳ ಪ್ರೇಮ ಪ್ರಕರಣದಿಂದ ಸಿಟ್ಟುಗೊಂಡು ತಾನೇ ಆಕೆಯನ್ನು ದೂಧಗಂಗಾ ನದಿಯ ದನ್ವಾಡ್ ಸೇತುವೆಯಿಂದ ತಳ್ಳಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಾಕ್ಷಿಯ ಶವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು