8:36 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಟರ್ಪಾಲಿನೊಳಗಡೆ ಬ್ರಹ್ಮರಕೂಟ್ಲು ಟೋಲ್‌ಬೂತ್!!: ಸುಂಕ ವಸೂಲಿ ಸಿಬ್ಬಂದಿಗಳಿಗೆ ಸೌಕರ್ಯಗಳೇ ಇಲ್ಲ!

02/06/2024, 20:02

ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ

info.reporterkarnataka@gmail.com

ಟರ್ಪಾಲಿನಲ್ಲಿ ಮುಚ್ಚಿಕೊಂಡ ನಾಲ್ಕು ಬೂತ್‌ಗಳು,ಟರ್ಪಾಲಿನೊಳಗಡೆ ಕಬ್ಬಿಣದ ತುಕ್ಕು ಹಿಡಿದ ಮೆಶ್‌ನಿಂದ ನಿರ್ಮಾಣ ಮಾಡಿದ ಸುಂಕ ವಸೂಲಿಯ ಪುಟ್ಟ ಕೊಠಡಿ, ಅದರ ಸುತ್ತಲೂ ಕಬ್ಬಿಣದ ಶೀಟುಗಳ ರಾಶಿ, ಮತ್ತೊಂದು ಕಡೆ ತುಕ್ಕು ಹಿಡಿದಿರುವ ಕಬ್ಬಿಣದ ಪೈಪುಗಳ ರಾಶಿ ಹೀಗೆ ಕಬ್ಬಿಣದ ಪಂಜರದೊಳಗಿಂದ ದಿನದಲ್ಲಿ ಲಕ್ಷಾಂತರ ಸುಂಕ ವಸೂಲಿ ಮಾಡುತ್ತಿದ್ದರೂ ಕಾರ್ಮಿಕರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ.


ಇದು ಮಂಗಳೂರು-ಬೆಂಗಳೂರು ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬ್ರಹ್ಮರಕೂಟ್ಲುವಿನಲ್ಲಿ ಹಲವಾರು ವರ್ಷಗಳಿಂದ ಸುಂಕ ವಸೂಲಿ ಮಾಢುತ್ತಿರುವ ಟೋಲ್ ಕೇಂದ್ರದ ದುಸ್ಥಿತಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದಿನಕ್ಕೆ ಲಕ್ಷಾಂತರ ಹಣವನ್ನು ರಾತ್ರಿ ಹಗಲೆನ್ನದೇ, ಮಳೆ ಬಿಸಿಲೆನ್ನದೇ ರಸ್ತೆಯಲ್ಲೇ ನಿಂತು ದಿನನಿತ್ಯ ಪ್ರವಾಸಿಗರಿಂದ ಬೈಗಳನ್ನೂ ತಿಂದರೂ ಸುಂಕ ವಸೂಲಿ ಮಾಡಿ ನೀಡುವ ಬೂತ್ ಮಾತ್ರ ಗ್ರಾಮೀಣ ಭಾಗದಲ್ಲಿರುವ ಗೂಡಂಗಡಿಗೆ ತರ್ಪಾಲ್ ಮುಚ್ಚಿದ ಸ್ಥಿತಿಯಲ್ಲಿದೆ.
*ಮೇಲ್ಚಾವಣಿ ರಿಪೇರಿ:*
ಕಳೆದ ಕೆಲವು ದಿನಗಳಿಂದ ಟೋಲ್ ಪ್ಲಾಜಾದ ಮೇಲ್ಚಾವಣಿ ಶೀಟು ಇಲ್ಲದಿರುವ ಕಡೆ ಹೊಸ ಶೀಟುಗಳನ್ನು ಹಾಕಿದ್ದು, ಅದರಲ್ಲಿ ಉಳಿದ ಹಳೆಯ ತುಕ್ಕು ಹಿಡಿದಿರುವ ಕಬ್ಬಿಣದ ಕಂಬಗಳು, ಕಬ್ಬಿಣದ ಶೀಟುಗಳು ಸುಂಕ ವಸೂಲಿ ಕೇಂದ್ರದ ಹತ್ತಿರವೇ ರಾಶಿಯಾಗಿ ಬಿದ್ದಿದೆ. ಇದರಿಂದ ಇಲ್ಲಿರುವ ಕಾರ್ಮಿಕರಿಗೆ ಬರುವ ವಾಹನಗಳ ಸುಂಕ ವಸೂಲಿ ಮಾಡಲು ತೊಂದರೆಯಾಗುತ್ತಿದೆ.
*ರಾತ್ರಿ ಮರಳು ಲಾರಿ ವಿರುದ್ಧ ದಿಕ್ಕಿನಲ್ಲಿ ಸಂಚಾರ:* ಸರ್ವೀಸ್ ರಸ್ತೆಯಲ್ಲಿ ಘನವಾಹನಗಳಿಗೆ ತಡೆಬೇಲಿ ನಿರ್ಮಿಸಿರುವುದರಿಂದ ಬಿ.ಸಿ.ರೋಡಿನಿಂದ ಮರಳು ಕೊಂಡೊಯ್ಯಲು ಬರುತ್ತಿರುವ ಹೆಚ್ಚಿನ ವಾಹನಗಳು ರಾತ್ರಿ ಹೊತ್ತಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ವಿರುದ್ಧ ದಿಕ್ಕಿನಲ್ಲೇ ನಿರಂತರ ಸಂಚಾರ ಮಾಡುತ್ತಿವೆ. ಈ ಸಮಯದಲ್ಲಿ ಸುಂಕ ವಸೂಲಿ ಮಾಡುವ ಕಾರ್ಮಿಕರು ಮಾತ್ರ ಇದ್ದು, ಪೊಲೀಸ್ ಇಲಾಖೆ ಯಾವುದೇ ಸಿಬ್ಬಂದಿಯನ್ನು ನೇಮಿಸದೇ ಇರುವುದರಿಂದ ವಸೂಲಿ ಮಾಡುವ ಸಂದರ್ಭದಲ್ಲಿ ಪ್ರಾಣ ಭಯವೂ ಕಾಡುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡು ವ್ಯವಸ್ಥಿತ ರೀತಿಯಲ್ಲಿ ಈ ಟೋಲ್ ಬೂತ್‌ನ್ನು ನಿರ್ಮಾಣ ಮಾಡಬೇಕಾಗಿದೆ. ಇದರಿಂದ ಟೋಲ್ ವಸೂಲಿ ಕಾರ್ಮಿಕಗರಿಗೂ ಅನುಕೂಲವಾಗಲಿದೆ ಜೊತೆಗೆ ವಾಹನ ಸವಾರರಿಗೂ ಕೂಡ.
ಎಲ್ಲ ಕಡೆ ಟೋಲ್‌ಗೇಟ್ ವ್ಯವಸ್ಥೆ ಇರುವಂತೆ ಬ್ರಹ್ಮರಕೂಟ್ಲುವಿನಲ್ಲಿ ಇಲ್ಲ. ಸುಂಕ ನೀಡುವವರಿಗೇ ಯಾವುದೇ ವ್ಯವಸ್ಥೆ ಇಲ್ಲ. ಟೋಲ್ ಬೂತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೂ ಸರಿಯಾದ ಭದ್ರತೆ ಇಲ್ಲ. ಅಷ್ಟೇ ಅಲ್ಲದೇ ಟೋಲ್‌ಗೇಟ್ ಬಳಿ ಬರುವಾಗ ತುಕ್ಕು ಹಿಡಿದಿರುವ ಕಬ್ಬಿಣದ ಕೋಟೆಯೊಳಗೆ ಹೊಕ್ಕಿದಂತಾಗುತ್ತದೆ. ಪೈಂಟ್ ಬಳಿಯದೆ ಎಷ್ಟು ವರ್ಷಗಳಾಗಿರಬಹುದು ಎಂದು ಮಾಧವ ಬಿ.ಸಿ.ರೋಡು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು