7:44 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಥಣಿ: ಗೃಹ ಸಚಿವ ಡಾ. ಪರಮೇಶ್ವರ್, ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

02/06/2024, 22:18

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ವಾಲ್ಮೀಕಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಾಗೂ ಚನ್ನಗಿರಿ ಪೋಲೀಸ್ ಠಾಣೆಯ ಮೇಲೆ ಸಮಾಜಘಾತುಕರು ಕಲ್ಲು ತೂರಾಟ ನಡೆಸಿದ ಘಟನೆಯು ರಾಜ್ಯ ಸರಕಾರದ ವೈಫಲ್ಯದ ಫಲ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಅಥಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಾಲ್ಮೀಕಿ ನಿಗಮದ ಅಧೀಕ್ಷಕ ಶಿವಮೊಗ್ಗದ ಪಿ. ಚಂದ್ರಶೇಖರನ್ ಇತ್ತೀಚೆಗೆ ನೇಣಿಗೆ ಶರಣಾಗಿದ್ದಾರೆ. ವಾಲ್ಮೀಕ ನಿಗಮದ ವ್ಯವಸ್ಥಾಪಕ ಮತ್ತು ಹಿರಿಯ ಅಧಿಕಾರಿಗಳು ಅವರಿಗೆ ಕಿರುಕುಳ ಕೊಟ್ಟು ಸುಮಾರು 184 ಕೋಟಿ ರೂಪಾಯಿಗಳನ್ನು ಕಾನೂನು ಬಾಹೀರವಾಗಿ ಪರಭಾರೆ ಮಾಡಿದ್ದರಿಂದ ಅವರುಗಳ ಹೆಸರುಗಳನ್ನು ಡೆತ್‌ನೋಟನಲ್ಲಿ ಬರೆದಿಟ್ಟು ಅವರು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಹಾಗೆ ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಪೋಲೀಸ್ ಠಾಣೆಯ ಮೇಲೆ ಸಮಾಜ ಘಾತುಕರು ಕಲ್ಲು ತೂರಾಟ ಮಾಡಿದ್ದಾರೆ. ಒಬ್ಬ ಮಟ್ಕಾ ಬುಕ್ಕಿಯು ಹೃದಯಾಘಾತದಿಂದ ಪೋಲೀಸ ಠಾಣೆಯಲ್ಲಿ ಮೃತಪಟ್ಟಿದ್ದನೆನ್ನಲಾಗಿದೆ. ಈ ಎರಡೂ ಘಟನೆಗಳು ಕಾಂಗ್ರೆಸ್ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದನ್ನು ತೋರಿಸುತ್ತದೆ. ಕಾರಣ ಗೃಹ ಸಚಿವರು ಮತ್ತು ವಾಲ್ಮೀಕಿ ನಿಗಮದ ಹೊಣೆ ಹೊತ್ತ ನಾಗೇಂದ್ರ‌ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣಗಳನ್ನು ಕಾನೂನಿನ ಅನ್ವಯ ತನಿಖೆ ನಡೆಸಬೇಕು.ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಡಾ.ರವಿ ಸಂಕ, ಶಿವ ಪ್ರಸನ್ನ (ಪುಟ್ಟು) ಹಿರೇಮಠ್,ಪ್ರಧಾನ ಕಾರ್ಯದರ್ಶಿ ಸರಸ್ವತಿ ಮ. ನೇಮಗೌಡ.ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಕುಂತಲಾ ಘರ್ಗೆ,ಶಿವಲೀಲಾ ಪಟ್ಟಣಶೆಟ್ಟಿ,ಸಿದ್ದಪ್ಪ ಮುದುಕನ್ನವರ್,ಗಿರೀಶ್ ಬಂದೋಲಿ ಬುಟಾಳಿ,ಉಮೇಶ್ ಬಂಟೊಡ್ಕರ್,ರವಿ ಪೂಜಾರಿ,ಸಿದ್ದು ಮಾಳಿ,ಸಂಪತ್ ಕುಮಾರ್ ಶೆಟ್ಟಿ ರಾಜೇಂದ್ರ ಐಹೊಳೆ,ಅನಿಲ್ ಭಜಂತ್ರಿ, ವಿನಾಯಕ ಪಾಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು