1:52 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು