4:03 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು