9:51 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು