11:28 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು