7:15 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು