8:47 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನೂತನ ಸಂಸದರು ಇತರ ವಿಚಾರಗಳ ಬಿಟ್ಟು ಜಿಲ್ಲೆಯ ಅಭಿವೃದ್ಧಿ, ಸಾಮರಸ್ಯಕ್ಕೆ ಪ್ರಯತ್ನಿಸಲಿ: ಪದ್ಮರಾಜ್ ಆರ್. ಪೂಜಾರಿ

05/06/2024, 23:24

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ನೂತನ ಸಂಸದರು ಇತರ ಎಲ್ಲಾ ವಿಚಾರಗಳನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಯ ಮೂಲಕ ಸಾಮರಸ್ಯದ ಗತ ವೈಭವವನ್ನು ಮರಳಿ ತರುವ ಪ್ರಯತ್ನ ಮಾಡಬೇಕು ಎಂದು ವಿರೋಚಿತ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಫಲಿತಾಂಶ ಪ್ರಕಟಗೊಂಡ ಬಳಿಕ ಬುಧವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಥಮ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಂಸದರಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿ ಮಾತು ಮುಂದುವರಿಸಿದ ಪದ್ಮರಾಜ್ ಅವರು, ಜಿಲ್ಲೆಯ ಅಭಿವೃದ್ಧಿ ಹಾಗೂ ಕೋಮು ಸೌಹಾರ್ದಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೂತನ ಸಂಸದರನ್ನು ಮುಂದೆಯೂ ಎಲ್ಲಾ ರೀತಿಯಲ್ಲಿ ಬೆಂಬಲಿಸಲು ಸದಾ ಸಿದ್ಧನಿದ್ದೇನೆ ಎಂದರು.
ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಪ್ರತಿಕೂಲವಾದ ವಾತಾವರಣದ ಮಧ್ಯೆಯೂ ಪಕ್ಷ ಉತ್ತಮ ಸಾಧನೆ ಮಾಡಿರುವ ತೃಪ್ತಿ ಇದೆ. ಟಿಕೆಟ್ ದೊರೆತ ಬಳಿಕ ಮತದಾರರನ್ನು ಭೇಟಿಯಾಗಲು ಸಿಕ್ಕಿದ ಕೆಲವೇ ದಿನಗಳ ಕಾಲಾವಧಿಯಲ್ಲಿ ಜಿಲ್ಲೆಯ 6.15 ಲಕ್ಷ ಮತದಾರರ ಮನಸ್ಸು ಗೆಲ್ಲಲು ಸಾಧ್ಯವಾಗಿರುವ ಬಗ್ಗೆ ಖುಷಿ ಇದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಸಂಘಟಿಸುವ ಕಾರ್ಯವನ್ನು ನಡೆಸುವುದಾಗಿ ಹೇಳಿದರು.
ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಗೌರವ ನೀಡಿ ಪಕ್ಷದ ಹಿರಿಯ ನಾಯಕರು ಟಿಕೆಟ್ ನೀಡಿದರೆ, ಪಕ್ಷದ ಕಾರ್ಯಕರ್ತರು ಹಗಲಿರಲು ಕ್ಷೇತ್ರದಲ್ಲಿ ತನ್ನ ಗೆಲುವಿಗಾಗಿ ಶ್ರಮಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಜಿಲ್ಲೆಯಲ್ಲಿ ಸ್ಪರ್ಧೆಗೆ ಟಿಕೆಟ್ ಪಡೆಯುವ ಸಂದರ್ಭ ಇಲ್ಲಿ ಟಿಕೆಟ್ ಪಡೆಯುವುದು ವ್ಯರ್ಥ ಎಂಬ ಮಾತು ಕೇಳಿ ಬಂದಿತ್ತು. ಮತದಾರರನ್ನು ಸಂಪರ್ಕಿಸಲು ಸಿಕ್ಕಿದ ಕೆಲವೇ ದಿನಗಳಲ್ಲಿ ಕೆಲ ಕ್ಷೇತ್ರಗಳಿಗೆ ಕೆಲ ಗಂಟೆಯ ಸಮಯವನ್ನೂ ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಪಕ್ಷದ ನಾಯಕರು, ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಹಿಂದಿನ ಅಭ್ಯರ್ಥಿಗಿಂತ ಹೆಚ್ಚಿನ ಮತಗಳನ್ನು ಪಡೆದ ಬಗ್ಗೆ ಹೆಮ್ಮೆ ಇದೆ ಎಂದು ಅವರು ಹೇಳಿದರು.
ಚುನಾವಣೆಯಲ್ಲಿ ನಾನು ಸೋತಿರಬಹುದು, ಆದರೆ ಪಕ್ಷದ ಕಾರ್ಯಕರ್ತರು ನನಗೆ ನೀಡಿದ ಬೆಂಬಲವನ್ನ ಮರೆಯುವಂತಿಲ್ಲ. ನಿನ್ನೆ ರಾಷ್ಟ್ರೀಯ ನಾಯಕರು ಕರೆ ಮಾಡಿ ಶ್ಲಾಘಿಸಿ, ನನ್ನ ಸ್ಪರ್ಧೆ ಬಗ್ಗೆ ಯೂ ಫೈಟ್ ಲೈಕ್ ಎ ಲಯನ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಯಕರು ಹಾಗೂ ಕಾರ್ಯಕರ್ತರ ವಿಶ್ವಾಸವನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲೂ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದ್ದೇನೆ ಎಂದರು.
ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಸಾಧನೆ ಉತ್ತಮವಾಗಿದೆ. ಬಿಜೆಪಿಯನ್ನ ಜನ, ಅಯೋಧ್ಯೆಯಲ್ಲೇ ಸೋಲಿಸಿದ್ದಾರೆ. ಆದರೆ ಕರಾವಳಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಈ ಬಗ್ಗೆ ಆಲೋಚನೆ ಮಾಡಬೇಕಾಗಿದೆ ಎಂದು ಪದ್ಮರಾಜ್ ಹೇಳಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಮುಖಂಡರಾದ ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಶುಭೋದಯ ಆಳ್ವ, ಅಶ್ರಫ್, ಲ್ಯಾನ್ಸಿ ಲೋಟ್ ಪಿಂಟೋ, ಸಂಶುದ್ದೀನ್, ಅಬ್ದುಲ್ ಲತೀಫ್, ಅಬ್ದುಲ್ ಖಾದರ್, ಅಬ್ದುಲ್ ರವೂಫ್, ಸುಹಾನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು