11:56 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು