7:15 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು