7:51 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ

06/06/2024, 20:36

ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತೆ ಬಡವರ ಕಣ್ಣೀರೊರೆಸುವ ನಿಟ್ಟಿನಲ್ಲಿ ಫಿಲ್ಡಿಗಿಳಿದಿದ್ದಾರೆ.


ಕಷ್ಟದಲ್ಲಿರುವವರಿಗೆ ನೆರವಾಗಬೇಕೆನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋ ಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಪದ್ಮರಾಜ್ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು,ನೌಷಾದ್,ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ,ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು