4:08 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು