9:04 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು