12:08 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು