2:58 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು