1:03 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್​ ಕೌರ್​ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ

08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್​ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್​ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು