4:11 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್​ ಕೌರ್​ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ

08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್​ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್​ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು