12:08 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ?

09/06/2024, 15:54

ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರ ವಹಿಸಲಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಗೋವಿಂದ ಕಾರಜೋಳ ಅಥವಾ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು