10:57 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ?

09/06/2024, 15:54

ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರ ವಹಿಸಲಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಗೋವಿಂದ ಕಾರಜೋಳ ಅಥವಾ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು