11:38 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬರೀ 40 ಶಾಸಕರಿದ್ರೆ ಮುಖ್ಯಮಂತ್ರಿಯೇ ಆಗ್ತಾರೆ!: ಕೇವಲ ಇಬ್ಬರು ಸಂಸದರಿದ್ದರೆ ಕೇಂದ್ರದಲ್ಲಿ ಸಚಿವರಾಗಿಯೇ ಬಿಡ್ತಾರೆ!!

09/06/2024, 23:01

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇಂದ್ರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಅವರ ಮಿತ್ರಪಕ್ಷವಾದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಮಿತ್ರಪಕ್ಷವಾದ ಜೆಡಿಯು ಮತ್ತು ತೆಲುಗುದೇಶಂ ಸಹಾಯದಿಂದ ಎನ್ ಡಿಎ ಮೈತ್ರಿಕೂಟ ಸರಕಾರದ ಮುಖ್ಯಸ್ಥರಾಗಿ ಮೋದಿ ಕಾರ್ಯನಿರ್ವಹಿಸಲಿದ್ದಾರೆ.
ಮಿತ್ರಪಕ್ಷಗಳ ಅಣತಿಯಂತೆ ಕಾರ್ಯನಿರ್ವಹಿಸುವ ಅನಿವಾರ್ಯತೆ ಮೋದಿ ಅವರಿಗಿದೆ.
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮಣಿಸಲು ಬಿಜೆಪಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿಕೊಂಡಿತ್ತು. ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ತನ್ನ ಅಸ್ತಿತ್ವಕ್ಕೆ ಸಂಚಕಾರ ಬರುತ್ತದೆ ಎಂಬುದನ್ನು ಮನಗಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೂಡ ಬಿಜೆಪಿ ಜತೆ ಹೋಗುವುದು ಅನಿವಾರ್ಯವಾಗಿತ್ತು. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಾದಾಗ ಜೆಡಿಎಸ್ ಪಾಲಿಗೆ 3 ಕ್ಷೇತ್ರಗಳು ದಕ್ಕಿದವು. ಆದರೆ ಮೂರರಲ್ಲಿ ಒಂದಾದ ಹಾಸನ ಕ್ಷೇತ್ರವನ್ನು ಅಲ್ಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಳೆದುಕೊಳ್ಳಬೇಕಾಯಿತು. ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ಅವರೇ ಗೆದ್ದರು. ಕೋಲಾರದಲ್ಲಿಯೂ ಜೆಡಿಎಸ್ ಗೆಲುವು ಕಂಡಿತು. ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದ ಜೆಡಿಎಸ್ ಗೆ ಸಂಜೀವಿನಿ ದೊರಕಿದಂತಾಯಿತು. ಮೈತ್ರಿಕೂಟ ಸರಕಾರದಲ್ಲಿ ಮೈತ್ರಿಧರ್ಮ ಪಾಲಿಸುವ ಅನಿವಾರ್ಯತೆ ಇರುವುದರಿಂದ ಎರಡು ಸಂಸದರನ್ನು ಹೊಂದಿರುವ ಜೆಡಿಎಸ್ ನ ನಾಯಕ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿಯೇ ಬಿಟ್ಟರು. ಅದೂ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕೃಷಿ ಖಾತೆ ಅವರ ಬೇಡಿಕೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರರಾದ ಕುಮಾರಸ್ವಾಮಿ ರಾಜಕೀಯವಾಗಿ ತುಂಬಾ ಲಕ್ಕಿ ಪರ್ಸನ್. ಹೀಗೆಂತ ರಾಜ್ಯದ ಜನತೆಯೇ ಆಡಿಕೊಳ್ಳುತ್ತಾರೆ. ಕೇವಲ 40 ಶಾಸಕರನ್ನು ಕಟ್ಟಿಕೊಂಡು ಅವರು ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಈಗ ಎರಡು ಸಂಸದರನ್ನು ಹೊಂದಿದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ನಮ್ಮದು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ.

ಇತ್ತೀಚಿನ ಸುದ್ದಿ

ಜಾಹೀರಾತು