11:04 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ಕಥಾ ಸಂಕಲನ ಪ್ರಶಸ್ತಿ ಹಾಗೂ ಕೃತಿ ಬಿಡುಗಡೆ ಸಮಾರಂಭ

10/06/2024, 12:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ 2023 ನೇ ಸಾಲಿನ ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರಧಾನ ಹಾಗೂ ಒರೆಗಲ್ಲು ಕೃತಿ ಬಿಡುಗಡೆ ಸಮಾರಂಭವನ್ನು ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಲೇಖಕರಾದ ಪ್ರೊ. ಕಾಳೇಗೌಡ ನಾಗವಾರ ಅವರು ಮತ್ತು ವೇದಿಕೆ ಮೇಲಿನ ಗಣ್ಯರು, ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಇದೇ ಸಂದರ್ಭ ಡಾ. ಬೆಸಗರಹಳ್ಳಿ ರಾಮಣ್ಣ ಅವರು ಎಪ್ಪತ್ತರ ದಶಕದಲ್ಲಿ ಮಂಡ್ಯದ ಕನ್ನಂಬಾಡಿ ಎಂಬ ಪತ್ರಿಕೆಗೆ ಒರೆಗಲ್ಲು ಎಂಬ ಅತ್ಯುತ್ತಮ ಅಂಕಣ ಬರೆಯುತ್ತಿದ್ದರು. ಈಗ ಆ ಎಲ್ಲ ಲೇಖನಗಳನ್ನು ಸೇರಿಸಿ ಒರೆಗಲ್ಲು ಎಂಬ ಕೃತಿ ಹೊರತಂದು ಅದನ್ನು ಬಿಡುಗಡೆ ಮಾಡಲಾಯಿತು.
ಅಲ್ಲದೆ 2023ರ ಅತ್ಯುತ್ತಮ ಕೃತಿ ದಾರಿ ತಪ್ಪಿಸುವ ಗಿಡ ಎಂಬ ಕೃತಿ ಬರೆದ ಲೇಖಕ ಸ್ವಾಮಿ ಪೊನ್ನಾಚಿ ಅವರಿಗೆ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆ, ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಮಾಡಿದ ಸಾಹಿತಿ ಪ್ರೊ, ಕಾಳೇಗೌಡ ನಾಗವಾರ ಅವರು ಮಾತನಾಡಿ,
70ರ ದಶಕದಲ್ಲಿ ಡಾ. ಬೆಸಗರಹಳ್ಳಿ ರಾಮಣ್ಣ ಅವರು ವೈದ್ಯ ವೃತ್ತಿಯೊಂದಿಗೆ ಸ್ವಾಹಿತ್ಯ ಕ್ಷೇತ್ರದಲ್ಲೂ ಉತ್ತಮ ಕೃಷಿ ಮಾಡಿ ಹಲವಾರು ಉತ್ತಮ ಪುಸ್ತಕಗಳನ್ನು ಬರೆದು ಸಮಾಜದ ಒಳಿತಿಗಾಗಿ ಶ್ರಮಿಸಿ ಮಂಡ್ಯದಲ್ಲಿ ಜನಾನುರಾಗಿಯಾಗಿದ್ದರು ಎಂದು ಅವರ ಜೀವನ ಮತ್ತು ತಮ್ಮ ಒಡನಾಟದ ಬಗ್ಗೆ ತಿಳಿಸಿದರು.
ಡಾ. ಬೆಸಗರಹಳ್ಳಿ ರಾಮಣ್ಣ ಅವರ ಪುತ್ರರು ಐಪಿಎಸ್ ಅಧಿಕಾರಿಗಳೂ, ಸಾಹಿತಿಗಳೂ ಆದ ಬಿ. ಆರ್. ರವಿಕಾಂತೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಬೆಸಗರಹಳ್ಳಿ ರಾಮಣ್ಣ ಅವರ ಕನಸು ಮತ್ತು ಆಶಯಗಳಿಗೆ ಅನುಗುಣವಾಗಿ ಒತ್ತು ನೀಡುವ ಮೂಲಕ 2007ರಲ್ಲಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಸಾಹಿತ್ಯ, ಶಿಕ್ಷಣ, ಕೃಷಿ, ಆರೋಗ್ಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದೆ ಎಂದು ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿ ತಂದೆಯ ಅಗಲಿಕೆಯನ್ನು ನೆನೆದು ಒಂದು ಕ್ಷಣ ಗದ್ಗದಿತರಾದರು.


ಪ್ರತಿಷ್ಠಾನದ ವತಿಯಿಂದ ವೇದಿಕೆ ಮೇಲಿನ ಗಣ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕರು ಸಂಘಟಕರು ಆದ ಕೋಟಿಗಾನಹಳ್ಳಿ ರಾಮಯ್ಯ, ಖ್ಯಾತ ಲೇಖಕರು ಹಾಗೂ ವಿಮರ್ಶಕರೂ ಆದ ಆರ್. ಸುನಂದಮ್ಮ, ಪ್ರತಿಷ್ಠಾನದ ಅಧ್ಯಕ್ಷರಾದ ಸುಜಾತಾ, ಪ್ರತಿಷ್ಠಾನದ ಅಜೀವ ಸದಸ್ಯರಾದ ಡಿಪಿ ರಾಜಮ್ಮ ರಾಮಣ್ಣ, ಪ್ರಶಸ್ತಿ ಪುರಸ್ಕೃತ ಸ್ವಾಮಿ ಪೊನ್ನಾಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು