9:19 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು