10:41 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಬೆಂಕಿ ಅವಘಡಕ್ಕೆ ತುತ್ತಾದ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗರಿಷ್ಠ ಪರಿಹಾರಕ್ಕೆ ಸೂಚನೆ

10/06/2024, 23:39

ಮಂಗಳೂರು(reporterkarnataka.com): ಬೆಂಕಿ ಅವಘಡ ಸಂಭವಿಸಿದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮಾರುಕಟ್ಟೆಯ 8 ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್. ಪೂಜಾರಿ ಅವರು ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು. ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಮಾತನಾಡಿದ ಪದ್ಮರಾಜ್‌ರವರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು