11:58 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವರಂಗ ಜೈನ ಮಠದ ಕೆರೆಯಲ್ಲಿ ಈಜಲಾಗದೆ ಒದ್ದಾಡಿದ ಯುವಕರು; ಲೈಫ್ ಜಾಕೆಟ್ ನೀಡಿ ರಕ್ಷಿಸಿದ ಪ್ರವಾಸಿಗರು

11/06/2024, 11:11

ಕಾರ್ಕಳ(reporterkarnataka.com): ಈಜಲು ಹೋದ ಯುವಕರು ನೀರಿನ ಮಧ್ಯದಲ್ಲಿ ಈಜಲು ಸಾಧ್ಯವಾಗದೆ ಒದ್ದಾಡುತ್ತಿದ್ದಾಗ ಲೈಫ್ ಜಾಕೆಟ್ ನೀಡಿ ಜೀವ ಉಳಿಸಿದ ಘಟನೆ ಹೆಬ್ರಿಯ ತಾಲೂಕಿನ ವರಂಗ ಜೈನ ಮಠದ ಕೆರೆಯಲ್ಲಿ ನಡೆದಿದೆ.

ಹೊರಜಿಲ್ಲೆಯಿಂದ ಆಗಮಿಸಿದ ಇಬ್ಬರು ಯುವಕರು ಕೆರೆಯಲ್ಲಿ ಒಂದು ದಡದಿಂದ ಕೆರೆ ಮಧ್ಯೆ ಇರುವ ಜೈನ ಮಠಕ್ಕೆ  ಈಜಿಕೊಂಡು ಸಾಗಿದ್ದಾರೆ. ಆದರೆ ನೀರಿನ ಮದ್ಯದಲ್ಲಿ ಯುವಕರು ಈಜಲು ಸಾಧ್ಯವಾಗದೇ ಒದ್ದಾಡಿದ್ದಾರೆ . ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಪ್ರವಾಸಕ್ಕೆ  ಅಗಮಿಸಿದ್ದರು ಲೈಫ್ ಜಾಕೆಟ್ ಬಿಸಾಡಿ ಯುವಕರನ್ನು ರಕ್ಷಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ದೇವಾಲಯ ಪುರೋಹಿತರು ಯುವಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
*ಸೆಕ್ಯುರಿಟಿ ಇಲ್ಲ:* ದಿನನಿತ್ಯ ಒಂದುವರೆ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ವರಂಗ ಕೆರೆಬಸದಿಗೆ ಅಗಮಿಸಿ ನಿಸರ್ಗದ ನಡುವೆ ಖುಷಿ ಯನ್ನು ಕಳೆಯುತ್ತಾರೆ. ಆದರೆ ಅದರಲ್ಲೂ ವಿಕೆಂಡ್ ನಲ್ಳಿ ರಜಾದಿನಗಳಲ್ಲಿ ನಿತ್ಯ 2000 ಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುತ್ತಾರೆ ಆದರೆ ಮಠದ ಆಡಳಿತ ಮಂಡಳಿಯ ನಿರ್ಲಕ್ಷ್ಯ ವೆ ಘಟನೆ ಗೆ ಸಾಕ್ಷಿ ಯಾಗಿದೆ. ಮಧ್ಯಾಹ್ನ ಹೊತ್ತಿಗೆ ಒಂದು ಘಂಟೆಗೆ ಗಳ ಸಮಯದಲ್ಲಿ ಅಂಬಿಗ ಊಟಕ್ಕೆ ತೆರಳುವ ವೇಳೆಯಲ್ಲಿ ಸೆಕ್ಯುರಿಟಿ ಯನ್ನು ನೇಮಿಸಲು ಸಾಧ್ಯವಾಗಿಲ್ಲ. ಅಕಸ್ಮಾತ್ತಾಗಿ ಪ್ರಾಣ ಹಾನಿ ಸಂಭವಿಸಿದರೆ ದುರಂತ ನಡೆದುಹೋಗುತಿತ್ತು.. ಬಸದಿಯ ಆಡಳಿತ ಮಂಡಳಿಯ ತೀರಾ ನಿರ್ಲಕ್ಷ್ಯ ವೆ ಘಟಕನೆಗೆ ಹೊಣೆಯಾಗಿದೆ.
ಘಟನೆ ಬಗ್ಗೆ ಮಠದ ಆಡಳಿತ ಮಂಡಳಿಯನ್ನು  ವಿಚಾರಿಸಿದಾಗ ಘಟನೆಯು  ದೋಣಿಯ ಅಂಬಿಗ ಹಾಗೂ ಜೈನ‌ಮಠದ ಪೂಜಾರಿ  ಊಟಕ್ಕೆ ತೆರಳಿದ ವೇಳೆ ಈ ಯುವಕರು ನೀರಿಗಿಳಿದು  ಹುಚ್ಚಾಟ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು