2:30 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ವರಂಗ ಜೈನ ಮಠದ ಕೆರೆಯಲ್ಲಿ ಈಜಲಾಗದೆ ಒದ್ದಾಡಿದ ಯುವಕರು; ಲೈಫ್ ಜಾಕೆಟ್ ನೀಡಿ ರಕ್ಷಿಸಿದ ಪ್ರವಾಸಿಗರು

11/06/2024, 11:11

ಕಾರ್ಕಳ(reporterkarnataka.com): ಈಜಲು ಹೋದ ಯುವಕರು ನೀರಿನ ಮಧ್ಯದಲ್ಲಿ ಈಜಲು ಸಾಧ್ಯವಾಗದೆ ಒದ್ದಾಡುತ್ತಿದ್ದಾಗ ಲೈಫ್ ಜಾಕೆಟ್ ನೀಡಿ ಜೀವ ಉಳಿಸಿದ ಘಟನೆ ಹೆಬ್ರಿಯ ತಾಲೂಕಿನ ವರಂಗ ಜೈನ ಮಠದ ಕೆರೆಯಲ್ಲಿ ನಡೆದಿದೆ.

ಹೊರಜಿಲ್ಲೆಯಿಂದ ಆಗಮಿಸಿದ ಇಬ್ಬರು ಯುವಕರು ಕೆರೆಯಲ್ಲಿ ಒಂದು ದಡದಿಂದ ಕೆರೆ ಮಧ್ಯೆ ಇರುವ ಜೈನ ಮಠಕ್ಕೆ  ಈಜಿಕೊಂಡು ಸಾಗಿದ್ದಾರೆ. ಆದರೆ ನೀರಿನ ಮದ್ಯದಲ್ಲಿ ಯುವಕರು ಈಜಲು ಸಾಧ್ಯವಾಗದೇ ಒದ್ದಾಡಿದ್ದಾರೆ . ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಪ್ರವಾಸಕ್ಕೆ  ಅಗಮಿಸಿದ್ದರು ಲೈಫ್ ಜಾಕೆಟ್ ಬಿಸಾಡಿ ಯುವಕರನ್ನು ರಕ್ಷಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ದೇವಾಲಯ ಪುರೋಹಿತರು ಯುವಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
*ಸೆಕ್ಯುರಿಟಿ ಇಲ್ಲ:* ದಿನನಿತ್ಯ ಒಂದುವರೆ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ವರಂಗ ಕೆರೆಬಸದಿಗೆ ಅಗಮಿಸಿ ನಿಸರ್ಗದ ನಡುವೆ ಖುಷಿ ಯನ್ನು ಕಳೆಯುತ್ತಾರೆ. ಆದರೆ ಅದರಲ್ಲೂ ವಿಕೆಂಡ್ ನಲ್ಳಿ ರಜಾದಿನಗಳಲ್ಲಿ ನಿತ್ಯ 2000 ಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುತ್ತಾರೆ ಆದರೆ ಮಠದ ಆಡಳಿತ ಮಂಡಳಿಯ ನಿರ್ಲಕ್ಷ್ಯ ವೆ ಘಟನೆ ಗೆ ಸಾಕ್ಷಿ ಯಾಗಿದೆ. ಮಧ್ಯಾಹ್ನ ಹೊತ್ತಿಗೆ ಒಂದು ಘಂಟೆಗೆ ಗಳ ಸಮಯದಲ್ಲಿ ಅಂಬಿಗ ಊಟಕ್ಕೆ ತೆರಳುವ ವೇಳೆಯಲ್ಲಿ ಸೆಕ್ಯುರಿಟಿ ಯನ್ನು ನೇಮಿಸಲು ಸಾಧ್ಯವಾಗಿಲ್ಲ. ಅಕಸ್ಮಾತ್ತಾಗಿ ಪ್ರಾಣ ಹಾನಿ ಸಂಭವಿಸಿದರೆ ದುರಂತ ನಡೆದುಹೋಗುತಿತ್ತು.. ಬಸದಿಯ ಆಡಳಿತ ಮಂಡಳಿಯ ತೀರಾ ನಿರ್ಲಕ್ಷ್ಯ ವೆ ಘಟಕನೆಗೆ ಹೊಣೆಯಾಗಿದೆ.
ಘಟನೆ ಬಗ್ಗೆ ಮಠದ ಆಡಳಿತ ಮಂಡಳಿಯನ್ನು  ವಿಚಾರಿಸಿದಾಗ ಘಟನೆಯು  ದೋಣಿಯ ಅಂಬಿಗ ಹಾಗೂ ಜೈನ‌ಮಠದ ಪೂಜಾರಿ  ಊಟಕ್ಕೆ ತೆರಳಿದ ವೇಳೆ ಈ ಯುವಕರು ನೀರಿಗಿಳಿದು  ಹುಚ್ಚಾಟ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು