11:20 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು