12:55 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು