4:09 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು