12:11 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ತಾಲಿಬಾನ್ ರೀತಿ ಆಡಳಿತ ನಡೆಸುತ್ತಿದೆ: ಮಂಗಳೂರಿನಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪ

12/06/2024, 16:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕೋಮು ಸೌಹಾರ್ದತೆ ಹಾಳು ಮಾಡುವ ಮೂಲಕ ತಾಲಿಬಾನಿ ರೀತಿಯಲ್ಲಿ ಸರಕಾರ ನಡೆಸುತ್ತಿದೆ. ತಾಲಿಬಾನ್ ಸರಕಾರವನ್ನು ನಾವು ಬಗ್ಗು ಬಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಮಂಗಳೂರಿನ ಹೊರ ವಲಯದ ಬೋಳ್ಯಾರ್‌ನಲ್ಲಿ ನಡೆದ ಚೂರಿ ಇರಿತ ಪ್ರಕರಣದ ಕುರಿತು ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು
ಭಾರತ್ ಮಾತಾ ಕೀ ಜೈ ಘೋಷಣೆ ಮಾತ್ರ ಕೂಗಿದ್ದಾರೆ.
ನಂತರ ಅವರನ್ನು ಅಟ್ಟಾಡಿಸಿ ಡ್ರ್ಯಾಗನ್ ನಿಂದ ಹೊಟ್ಟೆಗೆ ತುಚ್ಚಿದ್ದಾರೆ. ಅವರ ಕೈಯಲ್ಲಿ ಡ್ರ್ಯಾಗನ್‌ ಹೇಗೆ ಬಂತು, ಇದು ಪೂರ್ವ ನಿಯೋಜಿತ ಕೊಲೆ ಪ್ರಯತ್ನ ಎಂದು ಆರ್. ಅಶೋಕ್ ಆಪಾದಿಸಿದರು.


ವಿಧಾನಸಭೆಯಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರಿಗೆ ಬೇಲ್ ಕೊಡಿಸಿದ್ದಾರೆ. ಕರ್ನಾಟಕವನ್ನು ತಾಲಿಬಾನ್ ಮಾಡಲು ಹೋಗಿದ್ದಾರೆ. ತಾಲಿಬಾನ್ ಸರ್ಕಾರವನ್ನು ನಾವು ಬಗ್ಗು ಬಡಿಯುತ್ತೇವೆ. ಇದನ್ನು ಇಲ್ಲಿಗೆ ಬಿಡುದಿಲ್ಲ, ವಿಧಾನಸಭೆಯಲ್ಲಿ ಸ್ಪೀಕರ್ ಮುಂದೆ ಹೋರಾಟ ಮಾಡುತ್ತೇವೆ. ಇದು ಸ್ಪೀಕರ್ ಕ್ಷೇತ್ರದಲ್ಲಿ ನಡೆದಿರುವುದು.
ಹಲ್ಲೆಗೆ ಒಳಗಾದ ಪರವಾಗಿ ನಿಲ್ಲಬೇಕು ಅದು ಮನುಷ್ಯತ್ವ.
ಅದೇ ಆಸ್ಪತ್ರೆಗೆ ಆರೋಗ್ಯ ಸಚಿವರು ಹೋಗಿದ್ದರು, ಗಾಯಗೊಂಡವರನ್ನು ವಿಚಾರಿಸಿಲ್ಲ. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಮತ್ತೆ ಕೇಸ್ ಹಾಕಿದ್ದಾರೆ.
ಘಟನೆ ಆಗಿ ಮರುದಿನ ಕೇಸ್ ಮಾಡಿದ್ದಾರೆ, ಅಷ್ಟೋತ್ತು ಮಣ್ಣು ತಿನ್ನುತಿದ್ರಾ..? ಎಂದು ಅವರು ಕಿಡಿ ಮಾರಿದರು.
ವಿಡಿಯೋದಲ್ಲಿ ಪ್ರಚೋದನೆಕಾರಿ ಹೇಳಿದ್ರೆ ಬಿಡುಗಡೆ ಮಾಡಿ. ಅಮಾಯಕ ಮೇಲೆ ಕೇಸ್ ಮಾಡಿ, ಮೈನ್ ಕೇಸ್ ವೀಕ್ ಮಾಡುತ್ತಿದ್ದಾರೆ.
ಕಾರ್ಯಕರ್ತರ ಮೇಲೆ ಹಾಕಿದ ಕೇಸ್ ವಾಪಾಸು ತೆಗೆದುಕೊಳ್ಳಬೇಕು. ಕಾನೂನಿಗೆ ಬೆಲೆ ಇಲ್ಲ, ಹಾಳಾಗಿ ವರ್ಷ ಆಗಿದೆ. ಜಿಲ್ಲೆಗೆ ಒಬ್ಬೊಬ್ಬ ಹೋಮ್ ಮಿನಿಸ್ಟರ್ ಆಗಿದ್ದಾರೆ.
ಕ್ರೈಂ ರೇಟ್ 40% ಜಾಸ್ತಿಯಾಗಿದೆ. ಗೂಂಡಾ ರಾಜ್ಯ ಆಗೋಕೆ ಎಲ್ಲರನ್ನು ಪ್ರಿಪೇರ್ ಮಾಡಿದ್ದಾರೆ ಎಂದು ಅವರು ನುಡಿದರು.
ಸರ್ಕಾರ ಬದುಕಿದೆಯಾ? ಸತ್ತಿದೆಯಾ ಗೊತ್ತಾಗುತ್ತಿಲ್ಲ.
ಕಾಂಗ್ರೆಸ್‌ನಲ್ಲಿ ಪುಡಿ ರೌಡಿಗಳಿಗೆ ಪರವಾನಿಗೆ ಕೊಟ್ಟಂತೆ ಆಗಿದೆ.
ನಿಮ್ಮ ಯೋಗ್ಯತೆಗೆ ಗ್ಯಾರಂಟಿ ಏನಾಯ್ತು?, ನಿಮ್ಮ ಶಾಸಕರೇ ಉಗಿಯುತ್ತಿದ್ದಾರೆ.
ನಾಳೆ ಸಭೆ ಸೇರಿ, ಇದಕ್ಕೆ ಯಾವ ಹೋರಾಟ ಮಾಡುತ್ತೇವೆ ಎನ್ನುವ ತೀರ್ಮಾನ ಮಾಡುತ್ತೇವೆ. ಕಾರ್ಯಕರ್ತರ ಪರವಾಗಿ ನಿಲ್ಲುತ್ತೇವೆ
ಜಿಲ್ಲಾಡಳಿತ ಚೂರಿ ಇರಿತಕ್ಕೆ ಒಳಗಾದವರ ವೆಚ್ಚ ಭರಿಸಬೇಕು‌ ಎಂದು ಅವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು