1:06 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮೊನ್ನೆಯಷ್ಟೇ ಬಸ್ಸಿಗೆ ಅಡ್ಡ ನಿಂತಿದ್ದ ಕಾಡಾನೆ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಭೀತಿ

14/06/2024, 10:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಭೀತಿಯುಂಟು ಮಾಡಿದೆ.
ಮೂಡಿಗೆರೆ ತಾಲೂಕು ವ್ಯಾಪ್ತಿಗೆ ಸೇರಿದ ಘಾಟಿ ಪ್ರದೇಶದಲ್ಲಿ ಕಾಡಾನೆ ಶುಕ್ರವಾರ ಬೆಳ್ಳಂಬೆಳಗೆ ಪ್ರತ್ಯಕ್ಷವಾಗಿದೆ.
ಚಾರ್ಮಾಡಿ ಘಾಟಿಯಲ್ಲಿ 7 ಮತ್ತು 8ನೇ ತಿರುವಿನ ಮಧ್ಯೆ ಮೊನ್ನೆ ರಾತ್ರಿ ಸರಕಾರಿ ಬಸ್ಸಿಗೆ ಒಂಟಿ ಸಲಗ ಅಡ್ಡ ಬಂದು ನಿಂತಿತ್ತು. ಸುಮಾರು ಅರ್ಧ ತಾಸು ದಾರಿಯನ್ನು ತಡೆದಿತ್ತು. ಇದೀಗ ಶುಕ್ರವಾರ ಬೆಳಗ್ಗೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮತ್ತೆ ಒಂಟಿ ಕಾಡಾನೆ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆ ಮತ್ತೆ ಒಂಟಿ ಸಲಗ ಕಾಣಿಸಿಕೊಂಡಿದೆ.
ಮೊನ್ನೆ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದಿದ್ದ ಕಾಡಾನೆಯಿಂದ
ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು 2 ಕಿ.ಮೀ.ನಷ್ಟು ದೂರ ಟ್ರಾಫಿಕ್ ಕೂಡ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಅತ್ಯಂತ ಕಿರಿದಾದ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಾಗಿದೆ. ರಸ್ತೆಯ ಒಂದು ಬದಿ ಬೆಟ್ಟ, ಮತ್ತೊಂದು ಬದಿ ಸಾವಿರಾರು ಅಡಿ ಕಂದಕವಿದೆ. ಈ ಮಾರ್ಗದಲ್ಲಿ ಆನೆ ಎದುರಾದರೆ ತಪ್ಪಿಸಿಕೊಳ್ಳೋದು ಕಷ್ಟ‌.


ತಿರುವಿನಲ್ಲಿ ಬೈಕ್ ಸವಾರರು ಆನೆ ಕೈಗೆ ಸಿಕ್ಕರೆ ಅಪಾಯ ಕಟ್ಟಿಟ್ಟ ಬುತ್ತಿ. ಚಾರ್ಮಾಡಿ ಘಾಟಿ ತಪ್ಪಲಿನ ಗ್ರಾಮಗಳಿಗೂ ಒಂಟಿ ಸಲಗ ಬಂದಿತ್ತು.
ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳೀಯರು ಈಗಾಗಲೇ ಹಲವು ಬಾರಿ ಒತ್ತಾಯಿಸಿದ್ದಾರೆ.ಕಳೆದ ಎರಡು ತಿಂಗಳಿಂದ ನಿರಂತರವಾಗಿರುವ ಕಾಡಾನೆ ಕಾಟ ನೀಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು