10:59 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು